ಬೆಂಗಳೂರು ನಗರದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ, ರಸ್ತೆ ಅಗಲೀಕರಣ ವಿಳಂಬ ಹಾಗೂ ಮೂಲಸೌಕರ್ಯ ಸಮಸ್ಯೆಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲು Greater Bengaluru Authority (GBA) ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಸಂಬಂಧ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಪ್ರಮುಖ ನಿರ್ದೇಶನಗಳನ್ನು ನೀಡಿದ್ದಾರೆ.
5 ನಗರ ಪಾಲಿಕೆಗಳಲ್ಲಿ ಪ್ರತ್ಯೇಕ ಟಾಸ್ಕ್ ಫೋರ್ಸ್
ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ರಸ್ತೆ ಅಗಲೀಕರಣ ಮತ್ತು ಅನಧಿಕೃತ ಕಟ್ಟಡಗಳ ಮೇಲ್ವಿಚಾರಣೆಗೆ ಪ್ರತ್ಯೇಕ ಟಾಸ್ಕ್ ಫೋರ್ಸ್ಗಳನ್ನು ರಚಿಸಲಾಗುವುದು ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ. ವಿವಿಧ ಇಲಾಖೆಗಳು ಕೈಗೆತ್ತಿಕೊಂಡಿರುವ ಕಾಮಗಾರಿಗಳ ಅನುಷ್ಠಾನದಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಇಲಾಖೆಾಂತರ ಸಮನ್ವಯ ಸಭೆ ನಡೆಸಲಾಗಿದ್ದು, ಹಲವು ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.
ಅಧికారಿಗಳು ತಕ್ಷಣವೇ ಆಯಾ ಪಾಲಿಕೆಗಳಲ್ಲಿ ಟಾಸ್ಕ್ ಫೋರ್ಸ್ ರಚಿಸಿ, ಅನಧಿಕೃತ ನಿರ್ಮಾಣಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಸೂಚಿಸಲಾಗಿದೆ.
ರೈಲ್ವೆ ಕಾಮಗಾರಿಗಳ ಪ್ರಗತಿ ವರದಿ ಕಡ್ಡಾಯ
ಬೆಂಗಳೂರು ನಗರದಲ್ಲಿ ರೈಲ್ವೆ ಇಲಾಖೆಯ ಮೂಲಕ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳ ವಿವರ ಹಾಗೂ ಪ್ರಗತಿ ಕುರಿತು ಸಮಗ್ರ ಪಟ್ಟಿ ಸಿದ್ಧಪಡಿಸಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ವರದಿಯ ಆಧಾರದ ಮೇಲೆ ಜಿಬಿಎ ಮತ್ತು ರೈಲ್ವೆ ಇಲಾಖೆಯೊಂದಿಗೆ ಸಭೆ ನಡೆಸಿ, ಕಾಮಗಾರಿಗಳಿಗೆ ವೇಗ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ.
ಕೆ-100 ರಾಜಕಾಲುವೆ: ಕೊಳಚೆ ನೀರಿಗೆ ಸಂಪೂರ್ಣ ತಡೆ
ಪ್ರತಿಷ್ಠಿತ ಕೆ-100 ರಾಜಕಾಲುವೆ ಯೋಜನೆಗೆ ಕೊಳಚೆ ನೀರು ಸೇರುವುದನ್ನು ಸಂಪೂರ್ಣವಾಗಿ ತಡೆಯುವಂತೆ ಸೂಚನೆ ನೀಡಲಾಗಿದೆ.
- ಎಲ್ಲೆಲ್ಲಿ ಕೊಳಚೆ ನೀರು ಸೇರುತ್ತಿದೆ ಎಂಬುದರ ಸ್ಥಳ ಪರಿಶೀಲನೆ
- ಡೈಯಿಂಗ್ ಘಟಕಗಳಿಂದ ಬಣ್ಣದ ನೀರು, ಸ್ಲಾಟರ್ ಹೌಸ್ಗಳಿಂದ ರಕ್ತಮಿಶ್ರಿತ ನೀರು ಹರಿಯದಂತೆ ಕಠಿಣ ಕ್ರಮ
- ತಪ್ಪಿತಸ್ಥರಿಗೆ ದುಪ್ಪಟ್ಟು ದಂಡ ವಿಧಿಸುವಂತೆ ಸೂಚನೆ
ನೀರು ಮತ್ತೆ ಕಾಲುವೆಗೆ ಹರಿಯದಂತೆ ಕಟ್ಟುನಿಟ್ಟಿನ ನಿಗಾ ವಹಿಸಲು ಆದೇಶಿಸಲಾಗಿದೆ.
ಅಗ್ನಿ ಅವಘಡ ತಡೆಗೆ ಹೈಡ್ರಂಟ್ ವ್ಯವಸ್ಥೆ
ಜಿಬಿಎ ವ್ಯಾಪ್ತಿಯಲ್ಲಿ ಅಗ್ನಿ ಅವಘಡಗಳ ಸಂದರ್ಭದಲ್ಲಿ ತಕ್ಷಣ ನೀರು ಲಭ್ಯವಾಗುವಂತೆ:
- ನಗರಾದ್ಯಂತ ಹೈಡ್ರಂಟ್ ವ್ಯವಸ್ಥೆ
- ಕೆಲ ಪ್ರದೇಶಗಳಲ್ಲಿ 5 ಲಕ್ಷ ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ಗಳ ಸ್ಥಾಪನೆ
- ಜಿಬಿಎ ವ್ಯಾಪ್ತಿಯಲ್ಲಿ ಫೈರ್ ಕಂಟ್ರೋಲ್ ರೂಂ ಸ್ಥಾಪನೆ
ಈ ಎಲ್ಲಾ ಕ್ರಮಗಳನ್ನು ಜಲಮಂಡಳಿ ಮೂಲಕ ತ್ವರಿತವಾಗಿ ಕೈಗೊಳ್ಳುವಂತೆ ಸೂಚಿಸಲಾಗಿದೆ.
ರಸ್ತೆ ಅಗಲೀಕರಣ ಮತ್ತು ಟ್ರಾಫಿಕ್ ನಿಯಂತ್ರಣ
ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ:
- ಪಣತ್ತೂರು ಸಿಬಿಡಿ ರಸ್ತೆ, ನಾಗವಾರ ಮುಖ್ಯ ರಸ್ತೆ, ಹೊಸೂರು ರಸ್ತೆ (ಆನೆಪಾಳ್ಯ ಜಂಕ್ಷನ್) ಪರಿಶೀಲನೆ
- ಬನಶಂಕರಿ ಮುಖ್ಯ ರಸ್ತೆ ಅಗಲೀಕರಣಕ್ಕೆ ಒಂದು ವಾರದಲ್ಲಿ ಯೋಜನೆ ಸಲ್ಲಿಕೆ
- ಸಿಡಿಪಿ ರಸ್ತೆ ಅಗಲೀಕರಣಕ್ಕೆ ಟಾಸ್ಕ್ ಫೋರ್ಸ್ ಮೂಲಕ ಯೋಜನೆ
- ವೈಟ್ ಟಾಪಿಂಗ್ ರಸ್ತೆಗಳಲ್ಲಿ ಜಲಮಂಡಳಿ ಹಾಗೂ ಬೆಸ್ಕಾಂ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ
ಅಲ್ಲದೆ,
- 101 ಸ್ಥಳಗಳಲ್ಲಿ ಪಾದಚಾರಿ ಮೇಲ್ಸೇತುವೆ
- 103 ಕಡೆ ಬಸ್ ತಂಗುದಾಣ ಸ್ಥಳಾಂತರ
- 35 ರಸ್ತೆ ಅಭಿವೃದ್ಧಿ, 137 ವಾಟರ್ ಲಾಗಿಂಗ್ ಸಮಸ್ಯೆ ಪರಿಹಾರ
- 63 ಬಸ್ ಬೇ, 84 ರಸ್ತೆ ಹಂಪ್ಗಳ ತೆರವು
ಈ ಎಲ್ಲ ವಿಷಯಗಳ ಪಟ್ಟಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಅಡಿಕೆ ಬೆಲೆಯಲ್ಲಿ ಶಾಕ್ & ಸರ್ಪ್ರೈಸ್:ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ ಗೊತ್ತಾ?
“ಮಾಧ್ಯಮ ಒಂದು ಶಕ್ತಿ – ನಿಷ್ಪಕ್ಷಪಾತ ಸುದ್ದಿಯೇ ನಮ್ಮ ಧ್ಯೇಯ” ಎಂಬ ಧೋರಣೆಯೊಂದಿಗೆ, ನಾನು 7 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದೇನೆ. ಸ್ಥಳೀಯ ಸುದ್ದಿಗಳಿಂದ ಅಂತಾರಾಷ್ಟ್ರೀಯ ವಿಷಯಗಳವರೆಗೆ, ನಿಖರವಾದ ವರದಿ ಮತ್ತು ಪ್ರಾಮಾಣಿಕ ಮಾಹಿತಿಯನ್ನೇ ಒದಗಿಸಲು ನಮ್ಮ ಪ್ಲಾಟ್ಫಾರ್ಮ್ ಆರಂಭಿಸಲಾಗಿದೆ.
ಜವಾಬ್ದಾರಿ ಹಾಗೂ ನೈತಿಕತೆ ಪ್ರಧಾನ ಗುರಿಗಳಾಗಿದ್ದು, truth-first journalism ನಮ್ಮ ಧ್ಯೇಯ.
Interests: Investigative Reporting, Rural Journalism, Technology in Media
Quote: “Speak truth, even if your voice shakes.”






